Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:4
25 ತಿಳಿವುಗಳ ಹೋಲಿಕೆ  

ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.


ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು