Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:16
20 ತಿಳಿವುಗಳ ಹೋಲಿಕೆ  

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.


ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.


ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.


ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.


ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು