Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮ್ಮ ಗುರಾಣಿಯು ಯೆಹೋವ ದೇವರದೇ. ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:18
18 ತಿಳಿವುಗಳ ಹೋಲಿಕೆ  

ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.


ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.


ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು