Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:19
17 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು