Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:5
24 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?


ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.


ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.


ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.


ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು