Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿಸಿದ ಅವರ ಕೋಟೆಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:6
27 ತಿಳಿವುಗಳ ಹೋಲಿಕೆ  

ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ


ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?


ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.


ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು