Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:1
22 ತಿಳಿವುಗಳ ಹೋಲಿಕೆ  

ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.


ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು