Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:13
14 ತಿಳಿವುಗಳ ಹೋಲಿಕೆ  

ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಅವರು ಸರ್ಪದಂತೆ ವಿಷಭರಿತರು.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು