Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:12
17 ತಿಳಿವುಗಳ ಹೋಲಿಕೆ  

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.


ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.


ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,


ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು