Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:5
24 ತಿಳಿವುಗಳ ಹೋಲಿಕೆ  

ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.


ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.


ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.


ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು