Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:20
23 ತಿಳಿವುಗಳ ಹೋಲಿಕೆ  

ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.


ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.


ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.


ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು