Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:21
25 ತಿಳಿವುಗಳ ಹೋಲಿಕೆ  

ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


“‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು