Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:10
30 ತಿಳಿವುಗಳ ಹೋಲಿಕೆ  

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.


ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ


ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು