Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:9
14 ತಿಳಿವುಗಳ ಹೋಲಿಕೆ  

ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.


ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು