Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:10
38 ತಿಳಿವುಗಳ ಹೋಲಿಕೆ  

ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.


ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.


ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.


ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.


ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.


ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು