Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:7
19 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು