Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್ ತೆಚ್ಯಾಕ್ಡೆ ಅಪ್ಲೆ ಸಗ್ಳೆ ಸಂಪುರ್ನ್ ಪಾನ್ ರ್‍ಹಾವ್ಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:19
12 ತಿಳಿವುಗಳ ಹೋಲಿಕೆ  

ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು