Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಆಯ್ಕಲ್ಯಾ ಬರ್‍ಯಾ ಖಬ್ರೆ ವೈರ್ ತುಮ್ಕಾ ಹೊತ್ತ್ಯಾ ವಿಶ್ವಾಸಾರ್ ಘಟ್ಟ್ ಇಬೆ ರ್‍ಹಾವ್ನ್ ತೆಚ್ಯಾಕ್ನಾ ಯೆಲ್ಲೊ ಬರೊಸೊ ಸೊಡುನ್ ಜಾಯ್ನಸ್ಲ್ಯಾರ್, ಹೆ ಹೊತಾ, ಹಿ ಬರಿ ಖಬರ್ ಜಗಾಚ್ಯಾ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಕರುನ್ ಹೊಲಾ, ಪಾವ್ಲು ಮನ್ತಲೊ ಮಿಯಾ ಹಿ ಬರಿ ಖಬರ್ ಪರ್ಗಟ್ ಕರ್‍ತಲೊ ಸೆವಕ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:23
72 ತಿಳಿವುಗಳ ಹೋಲಿಕೆ  

ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”


ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು