ಕೊಲೊಸ್ಸೆಯವರಿಗೆ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತಸೆ ಹೊವ್ನುಚ್ ಅಮಿ ಕ್ರಿಸ್ತಾಚ್ಯಾ ವಿಶಯಾತ್ ಲೊಕಾಕ್ನಿ ಕಳ್ವುತಲೆ ಹೊವ್ನ್ ಹಾಂವ್. ಹರ್ ಎಕ್ಲ್ಯಾಕ್ಬಿ ಉಮ್ಮೆದ್ ಭರುಕ್ ಅನಿ ಹರ್ ಎಕ್ಲ್ಯಾಕ್ಬಿ ಶಿಕ್ವುಸಾಟ್ನಿ ಅಮ್ಚಿ ಬುದ್ದ್ ಫುರಾ ವಾಪರ್ತಾಂವ್, ಹರ್ ಎಕ್ಲ್ಯಾಕ್ಬಿ ಕ್ರಿಸ್ತಾಕ್ಡೆ ಫುರಾ ಆತ್ಮಿಕ್ ಸಾರ್ಕೆ ಕರುನ್ ದೆವಾಚ್ಯಾ ಇದ್ರಾಕ್ ಹಾನುಕ್ ಖಟ್ಪಟ್ ಕರ್ತಾಂವ್. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.