Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ವಿಶಯಾತ್ ಹಿ ಸಂಗ್ತಿಯಾ ಆಯ್ಕಲ್ಲ್ಯಾ ದಿಸಾಕ್ನಾ ತುಮ್ಚ್ಯಾಸಾಟ್ನಿ ಚುಕಿನಸ್ತಾನಾ ಮಾಗ್ನಿ ಕರ್ತಾಂವ್, ದೆವ್ ಆಶಾ ಕರ್‍ತಲಿ ಸಂಗ್ತಿಯಾ ಸಗ್ಳಿ ತುಮಿ ಫುರಾ ಕಳ್ವುನ್ ಘೆವ್ಚೆ ಮನುನ್ದ ಆತ್ಮಿಕ್ ಸಂಗ್ತಿಯಾತ್ನಿ ಮೊಟೆ ಶಾನೆಪಾನ್ ಅನಿ ಬುದ್ದ್ ಘೆವ್ಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:9
35 ತಿಳಿವುಗಳ ಹೋಲಿಕೆ  

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಎಡೆಬಿಡದೆ ಪ್ರಾರ್ಥನೆಮಾಡಿರಿ,


ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,


ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.


ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.


ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.


ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.


ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು