Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ವರ್‍ತಿ ಚುಕೆಚೊ ಅಪರಾದ್ ಘಾಟಲ್ಲ್ಯಾ ಹುಕುಮಾ ಸಾರ್ಕೆ ಹೊತ್ತ್ಯಾ ಚಿಟಿಕ್ ದೆವಾನ್ ಪುಸುನ್ ಟಾಕುನ್, ತೆಕಾ ಕುರ್ಸಾರ್ ಮಾರುನ್ ನಾ ಹೊಯ್ ಸಾರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:14
21 ತಿಳಿವುಗಳ ಹೋಲಿಕೆ  

ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


“‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.


ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.


ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು