Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:19
33 ತಿಳಿವುಗಳ ಹೋಲಿಕೆ  

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.


ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.


ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.


ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು