Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯ ಕಲ್ಪಿತ ಆಜ್ಞೆಗಳನ್ನೂ ಉಪದೇಶಗಳನ್ನೂ ಅನುಸರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ಮರುನ್, ಹ್ಯಾ ಜಗಾಚ್ಯಾ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾತ್ನಾ ಸುಟ್ಕಾ ಹೊಲ್ಯಾಸಿ. ಅಶೆ ರ್‍ಹಾಲ್ಯಾರ್‍ಬಿ, ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಯಾಂಚ್ಯಾ ಸಾರ್ಕೆ ಚಲ್ತ್ಯಾಸಿ? ಕಶ್ಯಾಕ್ ತುಮಿ ಹ್ಯಾ ನೆಮಾಚ್ಯಾ ಸಾರ್ಕೆ ಚಲ್ತ್ಯಾಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:20
19 ತಿಳಿವುಗಳ ಹೋಲಿಕೆ  

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.


ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.


ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.


“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು