Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಅದ್ದಿ ಜುದೆವಾಂಚೊ ಹೊವ್ನ್ ಹೊತ್ತ್ಯಾ ತನ್ನಾ, ಮಾಜಿ ಚಲ್ನುಕ್ ಕಸ್ಲಿ ಹೊತ್ತಿ ಮನುನ್ ತುಮಿ ಆಯಿಕ್ಲ್ಯಾಶಿ ತವ್ಡೆಚ್, ಮಿಯಾ ದೆವಾಚ್ಯಾ ತಾಂಡ್ಯಾಂಚ್ಯಾ ಲೊಕಾಕ್ನಿ ಲೈ ತರಾಸ್ ದಿವ್ನ್ ನಾಸ್ ಕರುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:13
14 ತಿಳಿವುಗಳ ಹೋಲಿಕೆ  

ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.


ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು