Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ಸಾಂಗಲ್ಲ್ಯಾ ಸಾರ್ಕೆ ಅನಿಪರ್ತುನ್ ಮಿಯಾ ತುಮ್ಕಾ ಸಾಂಗ್ತಾ: ತುಮಿ ಮಾನುನ್ ಘೆಟಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ಅನಿಎಕ್ ದುಸ್ರಿ ಖಬರ್ ಸಾಂಗ್ತಾ ಹೊಲ್ಯಾರ್, ತೆಂಚ್ಯಾ ವರ್‍ತಿ ಸರಾಪ್ ಪಡುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:9
13 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.


ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು