Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:14
30 ತಿಳಿವುಗಳ ಹೋಲಿಕೆ  

ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.


ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?


ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.


“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು