Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:20
65 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.


ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.


ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,


ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.


ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು