Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:2
19 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.


ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?


ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು