Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾನ್ ತುಮ್ಕಾ ಆತ್ಮೊ ದಿಲ್ಲೆ ಅನಿ ಆಜಾಪಾಚಿ ಕಾಮಾ ಕರಲ್ಲೆ ತುಮಿ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲುಲ್ಯಾಸಿ ಮನುನ್ ಕಾಯ್, ತುಮಿ ಬರಿ ಖಬರ್ ಆಯ್ಕುನ್ ತೆಚ್ಯಾ ವೈರ್ ವಿಶ್ವಾಸ್ ಕರ್ಲ್ಯಾಸಿ ಮನುನ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:5
14 ತಿಳಿವುಗಳ ಹೋಲಿಕೆ  

ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?


ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.


ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?


ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು