Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಫಾಟಿ ತುಮ್ಕಾ ದೆವಾಚಿ ವಳಕ್ ನತ್ತಿ, ಅನಿ ತುಮಿ ಸ್ವಭಾವಾನ್ ದೆವ್ ನ್ಹಯ್ ಹೊತ್ತ್ಯಾಕ್ನಿ ಗುಲಾಮಾ ಹೊವ್ನ್ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:8
31 ತಿಳಿವುಗಳ ಹೋಲಿಕೆ  

ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.


ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.


ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು