Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನಗಂತೂ ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ಭರವಸ ಉಂಟು. ನಿಮ್ಮಲ್ಲಿ ಭೇದವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ ಬರುವ ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಅಜುನ್‍ಬಿ ಧನಿಯಾಚ್ಯಾ ಎಕ್ವಟ್ಟಾ ವೈನಾ ತುಮ್ಚ್ಯಾ ವಿಶಯಾತ್ ಮಾಕಾ ಬರೊಸೊ ಹಾಯ್, ಅಮ್ಚೊ ಜಿವ್ ತುಮಿ; ತ್ಯಾ ತುಮ್ಕಾ ಬೆಜಾರ್ ಕರ್‍ತಲ್ಯಾ ಮಾನ್ಸಾಚ್ಯಾ ದುಸ್ರ್ಯಾ ವಾಟೆನ್ ಜಯ್‌ನ್ಯಾಶಿ ಮನುನ್, ಮಿಯಾ ಬರೊಸೊ ಕರಿನಾ ಸಾರ್ಕೆ ಕರ್‍ತಾ. ತೊ ಕೊನ್‍ಬಿ ರ್‍ಹಾಂವ್ದಿತ್ ತೆಕಾ ದೆವಾಕ್ನಾ ಶಿಕ್ಷಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:10
28 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.


ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.


ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.


ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.


ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.


ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.


ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.


ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು.


ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.


ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು