Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನ್ಸಾಚೊ ಸ್ವಬಾವ್ ಕರ್‍ತಲಿ ಕಾಮಾ ದಿಸುನ್ಗೆತ್ ಹಾತ್, ಅನೈತಿಕ್ ಸಮಂದ್, ಪೊಜ್ಡೆಪಾನ್ ಅನಿ ಮರ್‍ಯಾದ್ಗೆಡಿಪಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:19
30 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು