Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡಿರಿ, ಪೌಲನೆಂಬ ನಾನು ನಿಮಗೆ ಒಂದನ್ನು ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲು ಮನ್ತಲ್ಯಾ ಮಿಯಾ ತುಮಿ ಸುನ್ನತ್ ಕರುನ್ ಘೆವ್ಕ್ ತುಮ್ಕಾಚ್ ಸೊಡುನ್ ದಿಲ್ಯಾರ್, ಕ್ರಿಸ್ತಾಕ್ನಾ ಕಾಯ್ಬಿ ಫಾಯ್ದೊ ನಾ ಮನುನ್ ಹೊಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:2
16 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.


ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು