Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:1
41 ತಿಳಿವುಗಳ ಹೋಲಿಕೆ  

ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.


ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.


ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.


ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು