Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಕಾ ತರ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಸಾಚ್ಯಾ ಮೊಟೆಪಾನಾ ಶಿವಾಯ್ ದುಸ್ರೆ ಮೊಟೆಪಾನ್ ಪಾಜೆ ಹೊವ್ಕ್ ನಾ; ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಕುರ್ಸಾ ವೈನಾ ಜಗ್ ಮಾಜ್ಯಾ ವಾಟ್ಯಾಕ್ ಮರ್‍ಲಾ ಅನಿ ಮಿಯಾ ಜಗಾಚ್ಯಾ ವಾಟ್ಯಾಕ್ ಮರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:14
37 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.


ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು