Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:14
31 ತಿಳಿವುಗಳ ಹೋಲಿಕೆ  

ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು