Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:16
17 ತಿಳಿವುಗಳ ಹೋಲಿಕೆ  

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.


ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.


ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು