Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:17
30 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.


ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು