Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:20
32 ತಿಳಿವುಗಳ ಹೋಲಿಕೆ  

ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.


ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ


ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು