Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನಾನು - ಇವರು ಏನು ಮಾಡುವದಕ್ಕೆ ಬಂದಿದ್ದಾರೆ ಎಂದು ಕೇಳಲು ಅವನು - ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವದಕ್ಕೆ ಬಂದಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:21
6 ತಿಳಿವುಗಳ ಹೋಲಿಕೆ  

ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು