Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:8
26 ತಿಳಿವುಗಳ ಹೋಲಿಕೆ  

ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ


ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.


ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”


ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,


ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.


ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.


ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು