Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:11
27 ತಿಳಿವುಗಳ ಹೋಲಿಕೆ  

ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು