Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:16
16 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.


ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.


“ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು