Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:11
21 ತಿಳಿವುಗಳ ಹೋಲಿಕೆ  

ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.


“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು