Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:6
24 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,


ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು