Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:13
26 ತಿಳಿವುಗಳ ಹೋಲಿಕೆ  

ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?


ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು