Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:1
36 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.


ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,


ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು