Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:10
9 ತಿಳಿವುಗಳ ಹೋಲಿಕೆ  

ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.


ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು