Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:11
10 ತಿಳಿವುಗಳ ಹೋಲಿಕೆ  

ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,


ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು