Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:6
14 ತಿಳಿವುಗಳ ಹೋಲಿಕೆ  

ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.


“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು